Spread the love

ಶಿವಮೊಗ್ಗ  : ಪರಿಶಿಷ್ಟ ಜಾತಿ, ಪಂಗಡಗಳಿಗೆ ಒಳಮೀಸಲಾತಿಯನ್ನು ಹೆಚ್ಚಿಸುವ ಬಗ್ಗೆ ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರವನ್ನು ಖಂಡಿಸಿ ಬಂಜಾರ ಸಮುದಾಯದವರು ಬುಧವಾರವೂ ಪ್ರತಿಭಟನೆ ನಡೆಸಿದರು.

ಶಿವಮೊಗ್ಗದ ಗಾಡಿಕೊಪ್ಪದ ಬಂಜಾರ ಸಮುದಾಯದವರು ರಸ್ತೆ ತಡೆ ನಡೆಸಿ ಧರಣಿ ನಡೆಸಿದರು ಪ್ರತಿಭಟನಾಕಾರರು ಟಯರ್‌ಗಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಶಿವಮೊಗ್ಗ-ಸಾಗರ ರಾ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ರಸ್ತೆ ಮಧ್ಯೆ ಟಯರ್‌ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅಷ್ಟೇ ಅಲ್ಲದೆ  ಬಂಜಾರ ಜನಾಂಗದ ಶಾಸಕರು ಹಾಗೂ ಸಂಸದರ ಅಣುಕು ಶವ ಪ್ರದರ್ಶನವನ್ನು ಮಾಡಿ. ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಂಡಾದಲ್ಲಿ ಯಾವ ಪಕ್ಷದ ಎಮ್​.ಎಲ್.​ಎ ಹಾಗೂ ನಾಯಕರನ್ನು ಒಳಗೆ ಬಿಡುವುದಿಲ್ಲ. ಬಿಜೆಪಿ ಸರಕಾರ ಲಂಬಾಣಿ ಸಮುದಾಯದವರಿಗೆ ಅನ್ಯಾಯ ಮಾಡಿದೆ. ಚುನಾವಣೆಯಲ್ಲಿ ತಕ್ಕ ಪಾಠ ಕಲಿಸೋದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ  ಗಾಡಿಕೊಪ್ಪ ತಾಂಡದ ನಾಯಕ್, ಡಾವ್, ಕಾರ್ ಭಾರಿ, ಮತ್ತು ತಾಂಡಾದ ಗ್ರಾಮಸ್ಥರು ಮಹಿಳೆಯರು ಮಕ್ಕಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *