Spread the love

ಬೆಂಗಳೂರು: 2 ದಿನಗಳ ನಡೆಯುವ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಭಾಗವಹಿಸಲು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಅವರು, ಶುಕ್ರವಾರ ಸಂಜೆ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಲಿದ್ದಾರೆ.

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯ ರಾಜ್ಯ ಚುನಾವಣಾ ಸಮಿತಿಯು ಪ್ರತಿ ಕ್ಷೇತ್ರಕ್ಕೆ ಮೂವರ ಹೆಸರನ್ನು ಶಾರ್ಟ್‌ಲಿಸ್ಟ್ ಮಾಡಿದ್ದು, ನಾಳೆ ನಡೆಯಲಿರುವ ಸಂಸದೀಯ ಮಂಡಳಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಸಂಸದೀಯ ಮಂಡಳಿ ಸಭೆ ನಾಳೆ ದೆಹಲಿಯಲ್ಲಿ ನಡೆಯಲಿದೆ. ಇಂದು ಸಂಜೆ ದೆಹಲಿಗೆ ತೆರಳುತ್ತಿದ್ದು, 2 ದಿನಗಳ ಕಾಲ ನಡೆಯಲಿರುವ ಸಭೆಯಲ್ಲಿ ಚರ್ಚೆ ಪಟ್ಟಿಯ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ರಾಜ್ಯ ಚುನಾವಣಾ ಸಮಿತಿಯು ಚರ್ಚಿಸಿ ಪ್ರತಿ ಕ್ಷೇತ್ರಕ್ಕೆ ಮೂವರ ಹೆಸರುಗಳನ್ನು (ಪ್ರತಿ ಕ್ಷೇತ್ರಕ್ಕೆ) ಶಾರ್ಟ್‌ಲಿಸ್ಟ್ ಮಾಡಿದ್ದು, ಈ ಕುರಿತು ಕ್ಷೇತ್ರ ಮತ್ತು ಜಿಲ್ಲಾ ಮಟ್ಟದಲ್ಲಿ ಅಭಿಪ್ರಾಯಗಳನ್ನು ಸಂಗ್ರಹಿಸಲಾಗಿದೆ. ಈ ಅಭಿಪ್ರಾಯಗಳನ್ನು ಹಿಡಿದು ದೆಹಲಿಯಲ್ಲಿರುವ ಸಂಸದೀಯ ಮಂಡಳಿಯಲ್ಲಿ ಚರ್ಚಿಸಿ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.

Leave a Reply

Your email address will not be published. Required fields are marked *