Spread the love

ಚಿಕ್ಕಮಗಳೂರು : ಬೈಕ್ ಅಪಘಾತದದಲ್ಲಿ ಎನ್.ಎಸ್.ಜಿ. ಕಮಾಂಡೋ ಒಬ್ಬರು ದಾರುಣವಾಗಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ತರೀಕೆರೆ ತಾಲೂಕಿನ ತಣಿಗೇಬೈಲು ನಿವಾಸಿ ದೀಪಕ್ (31) ಮೃತ ದುರ್ದೈವಿ ಯೋಧ ಎಂದು ತಿಳಿದು ಬಂದಿದೆ. ಇತ್ತೀಚೆಗೆ ಎನ್.ಎಸ್.ಜಿ. ಬ್ಲ್ಯಾಕ್ ಕ್ಯಾಟ್ ಕಮಾಂಡೋವಾಗಿ ನೇಮಕವಾಗಿದ್ದರು. ಒಂದು ತಿಂಗಳ ರಜೆ ಮೇಲೆ ಊರಿಗೆ ಬಂದಿದ್ದು ಹೊಸ ಬೈಕಿನಲ್ಲಿ ಬೆಂಗಳೂರಿಗೆ ತೆರಳುವಾಗ ಬೆಂಗಳೂರಿನಲ್ಲೇ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.

2020ರಲ್ಲಿ ದೀಪಕ್ ಮದುವೆಯಾಗಿದ್ದರು. ಮನೆಯಲ್ಲಿ ಸಮಾರಂಭಕ್ಕೆಂದು ರಜೆಯಲ್ಲಿ ಬಂದಿದ್ದರು, ಹೊಸ ಬೈಕ್ ಖರೀದಿಸಿ ಕರ್ತವ್ಯಕ್ಕೆ ವಾಪಾಸಾಗುತ್ತಿದ್ದರು ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *