Spread the love

ಬೆಂಗಳೂರು : ಕೇಂದ್ರ ಕೃಷಿ‌ ಸಚಿವೆ ಶೋಭಾ ಕರಂದ್ಲಾಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ

ಚಿಕ್ಕಮಗಳೂರಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಬೇಜವಾಬ್ದಾರಿ ಮುಖ್ಯಮಂತ್ರಿ. ಯೋಜನೆಗಳನ್ನು ಘೋಷಿಸು ವಾಗ ನಿಮ್ಮ ತಲೆಯಲ್ಲಿ ಮೆದುಳು ಇರಲಿಲ್ವಾ ಎಂದು ಪ್ರಶ್ನಿಸಿದ್ದಾರೆ.

ಅಕ್ಕಿ ಕೊಡಲು ಆಗದಿದ್ದರೆ ಅಧಿಕಾರ ಬಿಟ್ಟು ತೊಲಗಿ, ಒಂದೇ ತಿಂಗಳಿಗೆ ರಾಜ್ಯದಲ್ಲಿ ಅರಾಜಕತೆ ತುಂಬಿದೆ. ಕಾಂಗ್ರೆಸ್ಸಿಗರಿಗೆ ಮಾನ ಮರ್ಯಾದೆ ಇಲ್ಲ ಎಂದು ಟೀಕಿಸಿದ್ದಾರೆ.

ರಾಜ್ಯ ಸರ್ಕಾರ ಒಂದು ಬೇಜವಾಬ್ದಾರಿಯ ಸರ್ಕಾರ. ಚುನಾವಣೆಯನ್ನ ಗೆಲ್ಲುವುದಕ್ಕೆ ಇಲ್ಲದ ಭರವಸೆ ಕೊಟ್ಟು, ಆಸೆ ತೋರಿಸಿದ್ರಿ, ಮಹಿಳೆಯರ ಬಸ್ಸಿಗೆ ಪಾಸ್ ಕೇಳುತ್ತಿದ್ದಾರೆ, ಸರ್ಟಿಫಿಕೇಟ್ ಕೇಳ್ತಿದ್ದಾರೆ. ನಾನು ಮಹಿಳೆ ಅನ್ನೋದಕ್ಕೆ ನನಗೆ ಸರ್ಟಿಫಿಕೇಟ್ ಬೇಕಿಲ್ಲ ಎಂದು ಕಿಡಿಕಾರಿದ್ದಾರೆ.

Leave a Reply

Your email address will not be published. Required fields are marked *