Spread the love

ಭದ್ರಾವತಿ : ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಿಕೆಗಳ ಪಾತ್ರ ಅಪಾರ ಎಂದು ಹಳೇನಗರದ ಸಂಚಿಯ ಹೊನ್ನಮ್ಮ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಸಿದ್ದಲಿಂಗಮೂರ್ತಿ ಹೇಳಿದರು.

ಇಂದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ದೃಶ್ಯ ಮಾಧ್ಯಮಗಳಿಗೆ ಜನರು ಜೋತು ಬಿದ್ದಿದ್ದು, ಈ ನಡುವೆಯೂ ಪತ್ರಿಕೆಗಳು ತಮ್ಮ ಜವಾಬ್ದಾರಿಗಳನ್ನು ಅರಿತು ಕರ್ತವ್ಯ ನಿರ್ವಹಿಸುತ್ತಿವೆ. ವಿದ್ಯಾರ್ಥಿಗಳು ಪ್ರತಿದಿನ ಪತ್ರಿಕೆಗಳನ್ನು ಓದುವ ಮೂಲಕ ಸಮಾಜದ ಎಲ್ಲಾ ವಿಚಾರಗಳ ಕುರಿತು ಅರಿವು ಹೊಂದಬೇಕು ಎಂದರು.

ಪತ್ರಿಕಾಭವನ ಟ್ರಸ್ಟ್‌ ಅಧ್ಯಕ್ಷ ಕಣ್ಣಪ್ಪ, ಹಿರಿಯ ಪತ್ರಕರ್ತ ಎನ್. ಬಾಬು, ಜಿಲ್ಲಾ ಸಂಘದ ಪ್ರಮುಖರಾದ ಪ್ರಧಾನ ಕಾರ್ಯದರ್ಶಿ ಅರುಣ್‌, ಆರ್.ಎಸ್‌ ಹಾಲಪ್ಪ ಸೇರಿದಂತೆ ಇನ್ನಿತರರು ಮಾತನಾಡಿ, ಇಂದು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಿಗೆ ನೀಡುವಷ್ಟು ಮಹತ್ವ ಪತ್ರಿಕೆಗಳಿಗೂ ನೀಡಬೇಕು. ಆ ಮೂಲಕ ತಮ್ಮ ಭವಿಷ್ಯಕ್ಕೆ ಸಹಕಾರಿಯಾಗಿರುವ ವಿಚಾರಗಳನ್ನು ಅರಿತುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್‌ ಶ್ರೀಹರ್ಷ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜ್‌ ಸ್ವಾಗತಿಸಿದರು. ಕಾಲೇಜಿನ ಚನ್ನಯ್ಯ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಕೂಡ್ಲಿಗೆರೆ ಮಂಜುನಾಥ್‌ ಪ್ರಾಸ್ತಾವಿಕ ನುಡಿಗಳನ್ನಾಡಿದರು, ಖಜಾಂಚಿ ಅನಂತಕುಮಾರ್‌ ವಂದಿಸಿದರು.

ಸಂಘದ ಹಿರಿಯ ಹಾಗೂ ಕಿರಿಯ ಸದಸ್ಯರು, ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಹಾಗು ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

 

Leave a Reply

Your email address will not be published. Required fields are marked *