ಶಿವಮೊಗ್ಗ: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊರಗಿನವರಲ್ಲ, ಅವರು ಆಕ್ರೋಶಗೊಂಡಿರಬಹುದು, ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಬೇಕೆಂಬುದು ನನ್ನ ಅಭಿಪ್ರಾಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯರೂ ಆಗಿರುವ ಬಿ.ಎಸ್. ಯಡಿಯೂರಪ್ಪ ಹೇಳಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಜೊತೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಅಪೇಕ್ಷೆ ಸಹ ಅದೇ ಆಗಿದೆ. ಏನೇ ಕೊರತೆಗಳಿದ್ರು ಎದುರು ಕುಳಿತುಕೊಂಡು ಮಾತನಾಡಿ ಬಗೆಹರಿಸಿಕೊಂಡು ಒಟ್ಟಾಗಿ ಹೋಗಬೇಕೆಂಬುದು ನನ್ನ ಅಭಿಪ್ರಾಯ. ಅದಕ್ಕೆ ಎಲ್ಲರೂ ಸಹಕರಿಸುತ್ತಾರೆಂದು ನಾನು ಭಾವಿಸಿರುವೆ. ಅವರು ಏನೇ ಮಾತನಾಡಿದ್ರು ಸಹ ಪಕ್ಷಕ್ಕೆ ಡ್ಯಾಮೇಜ್ ಆಗದ ರೀತಿಯಲ್ಲಿ ಒಟ್ಟಿಗೆ ಹೋಗಬೇಕು ಎಂಬುದು ನನ್ನ ಅಭಿಪ್ರಾಯವಾಗಿದೆ ಎಂದರು.