Spread the love

ಶಿವಮೊಗ್ಗ: ಹಬ್ಬ ಮುಗಿದ ನಂತರ ರಾಜ್ಯ ಪ್ರವಾಸ ಕೈಗೊಳ್ಳುತ್ತೇನೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಅಧಿವೇಶನ ನಡೆಯಬೇಕೆಂದು ದೊಡ್ಡ ಸೌಧ ಕಟ್ಟಿದ್ದೇವೆ. ಬೆಳಗಾವಿಯಲ್ಲಿ ಅಧಿವೇಶನ ವರ್ಷಕ್ಕೊಮ್ಮೆ ಮಾಡಬೇಕು. ತೀರ್ಮಾನ ಕೈಗೊಳ್ಳುವುದು ರಾಜ್ಯ ಸರ್ಕಾರಕ್ಕೆ ಬಿಟ್ಟಿದ್ದು ಎಂದರು.

ಅನಿಯಮಿತ ವಿದ್ಯುತ್ ಕಡಿತವಾಗುತ್ತಿದೆ. ರೈತರ ಪಂಪಸೆಟ್ ಗೆ ನೀರು ಸಿಗುತ್ತಿಲ್ಲ. ಅಲ್ಪ ಸ್ವಲ್ಪ ಬೆಳೆ ಮಾಡಲೂ ಆಗದ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಸರ್ಕಾರ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ಕಾವೇರಿ ವಿಷಯದಲ್ಲಿ ಹಿನ್ನಡೆಯಾಗುತ್ತಿದೆ. ಪ್ರಾಧಿಕಾರದ ತೀರ್ಮಾನದಿಂದ ನಮಗೆ ಸಮಾಧಾನವಿಲ್ಲ. ಸುಪ್ರಿಂ ಕೋರ್ಟ್ ಗೆ ಮೇಲ್ಮನವಿ ಮಾಡಿ ನ್ಯಾಯ ದೊರಕಿಸಿಕೊಡಬೇಕು, ಸರ್ಕಾರ ಆ ನಿಟ್ಟಿನಲ್ಲಿ ಮುಂದಾಗಲಿ ಎಂದು ಬಿಎಸ್ ಯಡಿಯೂರಪ್ಪ ಹೇಳಿದರು.

 

Leave a Reply

Your email address will not be published. Required fields are marked *